ದಕ್ಷಿಣ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿರ್ಮಾಪಕರು

ದಕ್ಷಿಣ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿರ್ಮಾಪಕರು (Famous Ancient Historical Inscriptions in India)

 

■ ದಕ್ಷಿಣ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು :

● ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ ----- ಹರಿಷೇಣ

● ಸಮುದ್ರಗುಪ್ತನನ್ನು ನೂರು ಕದನಗಳ ಸಿಂಹ ಎಂದು ಸಂಭೋದಿಸಿದ ಶಾಸನ ----- ಅಲಹಾ ಬಾದ್ ಸ್ತಂಭ ಶಾಸನ

● ಅಲಹಾಬಾದ್ ಸ್ತಂಭ ಶಾಸನ ಮೊದಲು ಇದ್ದ ಪ್ರದೇಶ ----- ಕೌಸಂಬಿ

● ಅಲಹಾಬಾದ್ ಸ್ತಂಭ ಶಾಸನವನ್ನು ಕೌಸಂಬಿಯಿಂದ ಅಲಹಾಬಾದಿಗೆ ಸಾಗಿಸಿದ ತುಘಲಕ್ ದೊರೆ ----- ಫೀರೋಜ್ ಷಾ ತುಘಲಕ್

● ದೆಹಲಿಯಲ್ಲಿರುವ ಗುಪ್ತರ ಕಾಲದ ಸ್ತಂಭ ಶಾಸನ ----- ಮೆಹ್ರೋಲಿ ಕಂಬ್ಬಿಣದ ಸ್ತಂಭ ಶಾಸನ

● ಫಿರೋಜ್ ಷಾ ತುಘಲಕ್, ದೆಹಲಿಗೆ ರವಾನಿಸಿದ ಅಶೋಕನ ಶಿಲಾಶಾಸನಗಳು ----- ಮಿರತ್ ಶಾಸನ ಹಾಗೂ ತೋಪ್ರ ಶಾಸನ

● ಗ್ರೀಕ್ ಹಾಗೂ ಅರೇಬಿಕ್ ಭಾಷೆಗಳಲ್ಲಿರುವ ಅಶೋಕನ ಶಾಸನಗಳು ಇರುವ ಪ್ರದೇಶ ----- ಕಂದಾಹಾರ್

● ಗಿರ್ನಾರ್ ಹಾಗೂ ಜುನಾಗಡ್ ಶಾಸನದ ಕರ್ತೃ ----- ರುದ್ರದಾಮನ್

● ಸುದರ್ಶನ ಕೆರೆಯ ಇತಾಹಾಸದ ಮೇಲೆ ಬೆಳಕು ಚೆಲ್ಲುವ ಶಾಸನಗಳು ----- ರುದ್ರದಾಮನ್ ಹಾಗೂ ಸ್ಕಂದ ಗುಪ್ತನ ಶಾಸನಗಳು

● ತೆಲುಗಿನ ಪ್ರಥಮ ಶಾಸನ ----- ಕಲಿಮಲ್ಲ ಶಾಸನ

● ತಮಿಳಿನ ಪ್ರಥಮ ಶಾಸನ ----- ಮಾಂಗುಳಂ ಶಾಸನ

● ಶಾಸನಗಳ ಪಿತಾಮಹಾ ಶಾಸನಗಳ ರಾಜ ಸ್ವಕಥನಗಾರ ಎಂದು ಖ್ಯಾತಿವೆತ್ತ ಮೌರ್ಯ ಅರಸ ----- ಅಶೋಕ

● ಅಶೋಕನ ಶಾಸನಗಳು ಈ ಲಿಪಿಯಗಳಲ್ಲಿ ಲಭ್ಯವಾಗಿದೆ ----- ಬ್ರಾಹ್ಮಿ ಹಾಗೂ ಖರೋಷ್ಠಿ

● ಕಳಿಂಗ ಯುದ್ಧದ ಬಗೆಗೆ ಬೆಳಕು ಚೆಲ್ಲುವ ಅಶೋಕನ ಶಾಸನ -----13 ನೇ ಶಿಲಾ ಶಾಸನ

● ಅಸೋಕನ ಶಾಸನವನ್ನು ಮೊಟ್ಟ ಮೊದಲು ಓದಿದವರು -----1837 ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯ ಜೇಮ್ಸ್ ಪ್ರಿನ್ಸಸ್

● ಅಶೋಕನನ್ನು ಪ್ರಿಯದರ್ಶಿ ಅಶೋಕ ಎಂದು ಸಂಭೋದಿಸಿಲಾದ ಶಾಸನ ----- ಮಸ್ಕಿ ಶಾಸನ

● ಮಸ್ಕಿ ಶಾಸನ ಪ್ರಸ್ತುತ ಈ ಜಿಲ್ಲೆಯಲ್ಲಿದೆ ----- ಕೊಪ್ಪಳ

● ಅಶೋಕನನ್ನು ರಾಜ ಅಶೋಕ , ದೇವನಾಂಪ್ರಿಯ ಎಂಬ ಹೆಸರುಗಳಿಂದ ಸಂಭೋಧಿಸಲಾದ ಶಾಸನ ----- ಬಳ್ಳಾರಿ ಜಿಲ್ಲೆಯ ನಿಟ್ಟೂರು ಶಾಸನ

● ನಿಟ್ಟೂರಿನ ಶಾಸನದ ರಚನಾಕಾರ ----- ಉಪಗುಪ್ತ

● ನಿಟ್ಟೂರಿನ ಶಾಸನದ ಲಿಪಿಕಾರ ----- ಚಡಪ

● ಸಾರಾನಾಥದ ಅಶೋಕನ ಸ್ತಂಭವನ್ನು ಭಾರತ ಸರ್ಕಾರ ರಾಷ್ಟ್ರೀಯ ಲಾಂಛನವನ್ನಾಗಿ ಅಳವಡಿಸಿಕೊಂಡ ವರ್ಷ ----- 1950ರಲ್ಲಿ

● ಸಾರಾನಾಥದ ಸ್ಥೂಪದ ಕೆಳಭಾಗದಲ್ಲಿ ಸತ್ಯ ಮೇವ ಜಯತೆ ಎಂಬ ಹೇಳಿಕೆಯನ್ನು ಈ ಲಿಪಿಯಲ್ಲಿ ಬರೆಯಲಾಗಿದೆ ----- ದೇವನಾಗರಿ

● ಅಶೋಕನು ಬೌದ್ಧಧರ್ಮವನ್ನು ಸ್ವೀಕರಿಸಿದ ಪರಿಯನ್ನು ತಿಳಿಸುವ ಶಾಸನ ----- ಬಬ್ರುಶಾಸನ

● ಮೊಟ್ಟ ಮೊದಲ ಭಾರಿಗೆ ಸಂಸ್ಕೃತದಲ್ಲಿ ಶಾಸನ ಬರೆಸಿದ ರಾಜ ----- ಶಕರ ಪ್ರಸಿದ್ದ ಅರಸ ರುದ್ರಧಮನ

● ಅಮೋಘವರ್ಷನು ಕೊಲ್ಲಾಪುರದ ಮಹಾಲಕ್ಷ್ಮೀಗೆ ತನ್ನ ಎಡಗೈ ಬೆರಳನ್ನು ಕತ್ತರಿಸಿ ಸಮರ್ಪಿಸಿದ ಬಗ್ಗೆ ತಿಳಿಸುವ ಶಾಸನ ----- ಸಂಜಾನ್ ದತ್ತಿ ಶಾಸನ

● ದಂತಿದುರ್ಗ ----- ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ

● ಒಂದನೇ ಕೃಷ್ಣ ----- ಭಾಂಡ್ಕ ಮತ್ತು ತಾಳೇಗಾಂ ಶಾಸನ

● ಧೃವ ----- ಜೆಟ್ಟಾಯಿ ಶಾಸನ

● ಅಮೋಘವರ್ಷ ----- ಸಂಜಾನ್ ತಾಮ್ರ ಶಾಸನ

● ಬಾದಾಮಿ ಶಾಸನದ ಕರ್ತೃ ----- 1 ನೇ ಪುಲಿಕೇಶಿ

● ಮಹಾಕೂಟ ಸ್ತಂಭ ಶಾಸನದ ಕರ್ತೃ ----- ಮಂಗಳೇಶ

● ಮಹಾಕೂಟ ಸ್ತಂಭ ಶಾಸನ ----- ಬಾದಾಮಿಯ ಮಹಾಕೂಟೇಶ್ವರ ದೇವಲಾಯದಲ್ಲಿದೆ

●ರವಿ ಕೀರ್ತೀ ----- ಐಹೋಳೆ ಶಾಸನ

● ಐಹೋಳೆ ಶಾಸನ ----- ಮೇಗುತಿ ಜಿನ ದೇವಾಲಯದಲ್ಲಿ ಕೆತ್ತಲಾಗಿದೆ

● ಚಂದ್ರವಳ್ಳಿ ಶಾಸನದ ಕರ್ತೃ ----- ಮಯೂರವರ್ಮ (ಚಿತ್ರದುರ್ಗ)

● ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ ----- ಚಂದ್ರವಳ್ಳಿ ಶಾಸನ

● ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ ----- ಚಂದ್ರವಳ್ಳಿ ಶಾಸನ

● ಕನ್ನಡದ ಮೊಟ್ಟ ಮೊದಲ ಶಾಸನ ----- ಹಲ್ಮಿಡಿ ಶಾಸನ

● ಹಲ್ಮಿಡಿ ಶಾಸನ ಇಲ್ಲಿ ಇರುವುದು ----- ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ

● ಹಲ್ಮಿಡಿ ಶಾಸನದ ಕರ್ತೃ ----- ಕಾಕುಸ್ಥವರ್ಮ

● ತಾಳಗುಂದ ಶಾಸನದ ಕರ್ತೃ ----- ಕವಿ ಕುಬ್ಜ

● ತಾಳಗುಂದ ಶಾಸನವನ್ನು ಬರೆಯಿಸಿದವರು ----- ಶಾಂತಿ ವರ್ಮ (ಶಿವಮೊಗ್ಗ ದಲ್ಲಿದೆ)

● ಮಹಿಪವೊಲು ತಾಮ್ರ ಶಾಸನದ ಕರ್ತೃ ----- ಶಿವಸ್ಕಂದ ವರ್ಮ 

● ವಾಯಲೂರು ಸ್ತಂಭ ಶಾಸನದ ಕರ್ತೃ ----- ರಾಜ ಸಿಂಹ 

● ಕರ್ನಾಟಕದ ಸಂಗೀತವನ್ನು ತಿಳಿಸುವ ಮೊಟ್ಟ ಮೊದಲ ಶಾಸನ ----- 1ನೇ ಮಹೇಂದ್ರ ಮರ್ಮನ್ ನ “ಕುಡಿಮಿಯಾ ಮಲೈ ಶಾಸನ ”

● ನಾನಾ ಘಾಟ್ ಶಾಸನದ ಕರ್ತೃ ----- ನಾಗನೀಕ 

● ಗುಹಾಂತರ ನಾಸಿಕ್ ಶಾಸನದ ಕರ್ತೃ ----- ಗೌತಮೀ ಬಾಲಾಶ್ರೀ

● ವೆಳ್ವಕುಡಿ ತಾಮ್ರ ಶಾಸನದ ಕರ್ತೃ ----- ಪರಾಂತಕ

Notes By : Kannada Kanaja Android App
(ಸ್ಪರ್ಧಾತ್ಮಕ ಪರೀಕ್ಷೆಗಳ ಸ್ವಯಂ ತಯಾರಿಗಾಗಿ ಇಂದೇ "Kannada Kanaja" ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ )
App Download Link
https://play.google.com/store/apps/details?id=com.app.kkmwqsomnbaruonjfshgtxqbldlvpvjhzaeiitxey

Post a Comment

0 Comments